ಶರೀಫರ ಸಂಸಾರದಲ್ಲಿ ಇಷ್ಟು ಚೆನ್ನಾಗಿ ಹೊಂದಿಕೊಂಡದ್ದಷ್ಟೇ
ಅಲ್ಲ, ಅವರ ಹೆಂಡತಿ ಅವರ ಆಧ್ಯಾತ್ಮ ಸಾಧನೆಯಲ್ಲಿಯೂ ಅವರಿಗೆ ಜೊತೆಗಾತಿಯಾಗಿರಬಹುದು.
“ಘನಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡೂನು ಬಾ ಗುಣವಂತೆ” ಎನ್ನುವ ಸಾಲುಗಳು ಸ್ಥೂಲದೇಹಕ್ಕಷ್ಟೇ ಅಲ್ಲ, ಸೂಕ್ಷ್ಮದೇಹ ಹಾಗೂ ಕಾರಣದೇಹಗಳಲ್ಲೂ ತಾವು ಜೊತೆಯಾಗಿರೋಣ ಎಂದು ಶರೀಫರು ತಮ್ಮ ಹೆಂಡತಿಗೆ ಕರೆ ಕೊಡುವದನ್ನು ತೋರಿಸುತ್ತವೆ.
ಕೆಲಕಾಲದ ನಂತರ ಶರೀಫರಿಗೆ ಒಂದು ಹೆಣ್ಣು ಮಗು ಜನಿಸಿ, ಬೇಗನೇ ಮರಣವನ್ನಪ್ಪುತ್ತದೆ. ಅವರ ಹೆಂಡತಿ ಫಾತಿಮಾ ಸಹ ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತಾಳೆ. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರ ಮಾವ ಅವರಿಗೆ ಹೇಳಿ ಕಳಿಸುತ್ತಾರೆ. ಆದರೆ, ಶರೀಫರು ಈಗ ಎಲ್ಲಾ ಮಾಯಾಬಂಧಗಳಿಂದ ಮುಕ್ತರಾಗಿದ್ದರು. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಅವರು ಭಾಗವಹಿಸಲಿಲ್ಲ. ಅವರ ಮನೋಭಾವನೆ ಈ ಹಾಡಿನಲ್ಲಿ ವ್ಯಕ್ತವಾಗಿದೆ:
ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||
ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||
ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||
ಇನ್ನು ಮುಂದೆ ಶರೀಫರ ಜೀವನವು ಪೂರ್ಣವಾಗಿ ಪಾರಮಾರ್ಥಿಕ ಸಾಧನೆಗೆ ಮೀಸಲಾಯಿತು. ಮಗಳು, ಮಡದಿ, ತಂದೆ,ತಾಯಿ ಹಾಗು ಕೊನೆಗೆ ಗುರು ಗೋವಿಂದ ಭಟ್ಟರ ನಿಧನದ ನಂತರ, ಶರೀಫರು ಪುಣ್ಯಕ್ಷೇತ್ರಗಳ ಯಾತ್ರೆ ಹಾಗು ಪುಣ್ಯಜೀವಿಗಳ ಭೆಟ್ಟಿಯಲ್ಲಿ ಕಾಲ ಕಳೆದರು. ನವಲಗುಂದದ ನಾಗಲಿಂಗಪ್ಪನವರು ಹಾಗೂ ಗರಗದ ಮಡಿವಾಳಪ್ಪನವರು ಶರೀಫರಿಗೆ ಅತ್ಯಂತ ಆಪ್ತರಾಗಿದ್ದರು.
ಆ ಅವಧಿಯಲ್ಲಿ ಇಳಿವಯಸ್ಸಿನಲ್ಲಿದ್ದ ಶ್ರೀ ಚಿದಂಬರ ಸ್ವಾಮಿಗಳ ಹಾಗು ಬಾಲಲೀಲಾ ಮಹಾಂತ ಶಿವಯೋಗಿಗಳ ದರ್ಶನ ಪಡೆದರು.
ಅಲ್ಲದೆ ಸಮಕಾಲೀನರಾದ ಅಗಡಿಯ ಶೇಷಾಚಲ ಸ್ವಾಮಿಗಳು, ಅವರಾದಿ ಫಲಾಹಾರ ಸ್ವಾಮಿಗಳು, ಗುಡಗೇರಿಯ ಕಲ್ಮಠದ ಸಂಗಮೇಶ್ವರರು, ಅಂಕಲಗಿಯ ಶ್ರೀ ಅಡವಿ ಸ್ವಾಮಿಗಳು ಹಾಗು ವಿಶ್ವಕರ್ಮದ ಪ್ರಭುಸ್ವಾಮಿಗಳು ಇವರೆಲ್ಲರ ಸತ್ಸಂಗವನ್ನು ಪಡೆದರು.
ತಮ್ಮ ಕೊನೆಯ ದಿನಗಳಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿಗಳನ್ನು ಸಂದರ್ಶಿಸಿದಾಗ ಸ್ವಾಮಿಗಳಿನ್ನೂ ಚಿಕ್ಕವರಿದ್ದರು.
“ಘನಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡೂನು ಬಾ ಗುಣವಂತೆ” ಎನ್ನುವ ಸಾಲುಗಳು ಸ್ಥೂಲದೇಹಕ್ಕಷ್ಟೇ ಅಲ್ಲ, ಸೂಕ್ಷ್ಮದೇಹ ಹಾಗೂ ಕಾರಣದೇಹಗಳಲ್ಲೂ ತಾವು ಜೊತೆಯಾಗಿರೋಣ ಎಂದು ಶರೀಫರು ತಮ್ಮ ಹೆಂಡತಿಗೆ ಕರೆ ಕೊಡುವದನ್ನು ತೋರಿಸುತ್ತವೆ.
ಕೆಲಕಾಲದ ನಂತರ ಶರೀಫರಿಗೆ ಒಂದು ಹೆಣ್ಣು ಮಗು ಜನಿಸಿ, ಬೇಗನೇ ಮರಣವನ್ನಪ್ಪುತ್ತದೆ. ಅವರ ಹೆಂಡತಿ ಫಾತಿಮಾ ಸಹ ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತಾಳೆ. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರ ಮಾವ ಅವರಿಗೆ ಹೇಳಿ ಕಳಿಸುತ್ತಾರೆ. ಆದರೆ, ಶರೀಫರು ಈಗ ಎಲ್ಲಾ ಮಾಯಾಬಂಧಗಳಿಂದ ಮುಕ್ತರಾಗಿದ್ದರು. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಅವರು ಭಾಗವಹಿಸಲಿಲ್ಲ. ಅವರ ಮನೋಭಾವನೆ ಈ ಹಾಡಿನಲ್ಲಿ ವ್ಯಕ್ತವಾಗಿದೆ:
ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||
ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||
ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||
ಇನ್ನು ಮುಂದೆ ಶರೀಫರ ಜೀವನವು ಪೂರ್ಣವಾಗಿ ಪಾರಮಾರ್ಥಿಕ ಸಾಧನೆಗೆ ಮೀಸಲಾಯಿತು. ಮಗಳು, ಮಡದಿ, ತಂದೆ,ತಾಯಿ ಹಾಗು ಕೊನೆಗೆ ಗುರು ಗೋವಿಂದ ಭಟ್ಟರ ನಿಧನದ ನಂತರ, ಶರೀಫರು ಪುಣ್ಯಕ್ಷೇತ್ರಗಳ ಯಾತ್ರೆ ಹಾಗು ಪುಣ್ಯಜೀವಿಗಳ ಭೆಟ್ಟಿಯಲ್ಲಿ ಕಾಲ ಕಳೆದರು. ನವಲಗುಂದದ ನಾಗಲಿಂಗಪ್ಪನವರು ಹಾಗೂ ಗರಗದ ಮಡಿವಾಳಪ್ಪನವರು ಶರೀಫರಿಗೆ ಅತ್ಯಂತ ಆಪ್ತರಾಗಿದ್ದರು.
ಆ ಅವಧಿಯಲ್ಲಿ ಇಳಿವಯಸ್ಸಿನಲ್ಲಿದ್ದ ಶ್ರೀ ಚಿದಂಬರ ಸ್ವಾಮಿಗಳ ಹಾಗು ಬಾಲಲೀಲಾ ಮಹಾಂತ ಶಿವಯೋಗಿಗಳ ದರ್ಶನ ಪಡೆದರು.
ಅಲ್ಲದೆ ಸಮಕಾಲೀನರಾದ ಅಗಡಿಯ ಶೇಷಾಚಲ ಸ್ವಾಮಿಗಳು, ಅವರಾದಿ ಫಲಾಹಾರ ಸ್ವಾಮಿಗಳು, ಗುಡಗೇರಿಯ ಕಲ್ಮಠದ ಸಂಗಮೇಶ್ವರರು, ಅಂಕಲಗಿಯ ಶ್ರೀ ಅಡವಿ ಸ್ವಾಮಿಗಳು ಹಾಗು ವಿಶ್ವಕರ್ಮದ ಪ್ರಭುಸ್ವಾಮಿಗಳು ಇವರೆಲ್ಲರ ಸತ್ಸಂಗವನ್ನು ಪಡೆದರು.
ತಮ್ಮ ಕೊನೆಯ ದಿನಗಳಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿಗಳನ್ನು ಸಂದರ್ಶಿಸಿದಾಗ ಸ್ವಾಮಿಗಳಿನ್ನೂ ಚಿಕ್ಕವರಿದ್ದರು.
No comments:
Post a Comment